ಹೊಸದಿಗಂತ ಡಿಜಿಟಲ್ ಡೆಸ್ಕ್
ಚೆನ್ನೈ: ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಭಾಗೃಹಂ ಇಂದು ಉದ್ಘಾಟನೆಯಾಗಿದೆ.
ಈ ಸಂದರ್ಭದಲ್ಲಿ ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ಅವರು ಮಾನವ ವಿಕಾಸದ ಮಿಷನ್ ಕುರಿತು ಪದ್ಮಶ್ರೀ ನಿವೇದಿತಾ ಭಿಡೆ ಬರೆದಿರುವ ‘ಭಾರತೀಯ ಸಂಸ್ಕೃತಿ ಸವಾಲುಗಳು ಮತ್ತು ಸಾಮರ್ಥ್ಯಗಳು’ ಪುಸ್ತಕವನ್ನು ಬಿಡುಗಡೆ ಮಾಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಪ್ರತಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣಂ, ವೆಲ್ಲಿಮಲೈ ಸ್ವಾಮಿ ಚೈತನ್ಯಾನಂದ ಮಹಾರಾಜ್, ಕೇಂದ್ರ ಕಾರ್ಯದರ್ಶಿ ಬಾನು ದಾಸ್ ಭಾಗವಹಿಸಿದ್ದರು.