ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ ಪೊಲೀಸರು ದಾಳಿ ನಡೆಸಿ, ಪರವಾನಗಿ ಇಲ್ಲದೆ ಸಂಗ್ರಹಿಸಿ ಇಟ್ಟಿದ್ದ ಟಿ-ಶರ್ಟ್ ಹಾಗೂ ಗೋಡೆ ಗಡಿಯಾರಗಳನ್ನು ಜಪ್ತಿ ಮಾಡಿದ್ದಾರೆ.
ಮುದ್ದೇಬಿಹಾಳ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇಲ್ಲಿನ ಸಕ್ಕರೆ ಕಾರ್ಖಾನೆ ಗೋದಾಮಿಗೆ ಸೋಮವಾರ ರಾತ್ರಿ ದಾಳಿ ನಡೆಸಿದ್ದ ವೇಳೆ, ಅಪಾರ ಪ್ರಮಾಣದಲ್ಲಿ ಟಿ- ಶರ್ಟ್ ಹಾಗೂ ಗೋಡೆ ಗಡಿಯಾರಗಳು ಪತ್ತೆಯಾಗಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಆರ್. ಪಾಟೀಲ ಅವರ ಭಾವಚಿತ್ರ ಹೊಂದಿರುವ ಗೋಡೆ ಗಡಿಯಾರ ಹಾಗೂ ಎಸ್ ಆರ್ ಪಿ ಗುರುತಿರುವ ಟಿ- ಶರ್ಟ್ ಗಳು ಸಂಗ್ರಹಿಸಿರುವುದು ಕಂಡು ಬಂದಿವೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.