ಹೊಸದಿಗಂತ ಡಿಜಿಟಲ್ ಡೆಸ್ಕ್
ನಾವು ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ನಿಮ್ಮ ವಿವಾದ ಅಸ್ಥಿರಗೊಳಿಸುವಂತಿದ್ದರೆ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ರಾಜ್ಯಪಾಲರ ಮೂಲಕ ಬಿಜೆಪಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಆರೋಪವನ್ನು ನಿರಾಕರಿಸಿ ಹೇಳಿಕೆ ನೀಡಿದರು.
ಮೊದಲು, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಯಾವುದೇ ಕಾರಣಕ್ಕೂ ಈ ಸರ್ಕಾರವನ್ನು ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ. ಸಿಎಂ ವಿರುದ್ಧ ಆರೋಪ ಮಾಡಲಾಗಿತ್ತು. ಅವರು ಸ್ವಚ್ಛವಾಗಿ ಹೊರಬರಲಿ. ಅವರ ತನಿಖೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದಾರೆ.