‘ಸಿದ್ದರಾಮಯ್ಯನ ಭ್ರಷ್ಟಾಚಾರದ ಬಗ್ಗೆ ಮಾತಾಡೋದು ಅಂದ್ರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ’

ಹೊಸದಿಗಂತ ವರದಿ ಹುಬ್ಬಳ್ಳಿ:

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಾಕಷ್ಟು ಚಾಜ್೯ಗಳಿವೆ. ಲೋಕಾಯುಕ್ತದಲ್ಲಿ ದೂರುಗಳಿವೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಎಂದರೆ‌ ಇದ್ಲಿ ಮಸಿಗೆ ಬುದ್ಧಿ ಹೇಳಿದಂತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವ್ಯಂಗ್ಯವಾಡಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳ ಪ ೫೯ ಪ್ರಕರಣಗಳ ಪೈಕಿ ಕೆಲವನ್ನು ಲೋಕಾಯಯಕ್ತಕ್ಕೆ ದೂರು ಕೊಟ್ಟಿದ್ದೇವೆ. ಇನ್ನೂ ಕೆಲವನ್ನು ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದರು.

ಚಿಂಚನಸೂರ ಕಾಂಗ್ರೆಸ್: ವಿಧಾನ‌ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ ಅವರು ಕಾಂಗ್ರೆಸ್ ನಿಂದ ಬಂದಿದ್ದರು. ಅವರಿಗೆ ಪಕ್ಷದಲ್ಲಿ ಎಲ್ಲ ಗೌರವ, ಸ್ಥಾನಮಾನ ನೀಡಿದರೂ ಪುನಃ ಕಾಂಗ್ರೆಸ್ ಗೆ ಹೊರಟಿದ್ದಾರೆ. ಗುರುಮಠಕಲ್ಲ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಚನ್ನಾಗಿದೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!