ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಭದ್ರತೆಯನ್ನು ಝಡ್ ಶ್ರೇಣಿಗೆ ಹೆಚ್ಚಿಸಲಾಗಿದೆ. ಈ ಹಿಂದೆ ವೈ ಕೆಟಗೆರಿ ಭದ್ರತೆ ಇದ್ದು, ಇದೀಗ ಝಡ್ ಶ್ರೇಣಿಯ ಭದ್ರತೆ ನೀಡಲಾಗಿದೆ. ಸಿಆರ್ಎಫ್ನ ಒಟ್ಟು 33 ಕಮಾಂಡೋಗಳು ಅವರಿಗೆ ಭದ್ರತೆ ನೀಡಲಿದ್ದಾರೆ.
ಮಾವೋವಾದಿಗಳು ಮತ್ತು ಧಾರ್ಮಿಕ ಉಗ್ರಗಾಮಿಗಳಿಂದ ಬೆದರಿಕೆ ಹೆಚ್ಚಾಗಿದ್ದು, ಅಪಾಯ ಹೆಚ್ಚುವ ಆತಂಕ ಹಿನ್ನೆಲೆ ಭದ್ರತೆ ಹೆಚ್ಚು ಮಾಡಲಾಗಿದೆ. ಐಬಿ ಬೆದರಿಕೆ ವರದಿ ಬಂದ ನಂತರ ಅಣ್ಣಾಮಲೈ ಅವರಿಗೆ ಝಡ್ ಕೆಟಗರಿ ಭದ್ರತೆ ನೀಡಲಾಗಿದೆ.