ಮಂಗಳೂರಿಗೆ ಆಗಮಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ‌ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮಕರಸಂಕ್ರಮಣದ ದಿನದಂದು ಪೊಳಲಿ ಕ್ಷೇತ್ರದಿಂದ ಆರಂಭಗೊಂಡ 13 ದಿನಗಳ ಗ್ರಾಮ ವಿಕಾಸ ಯಾತ್ರೆಯ ನಾಳೆ( ಶುಕ್ರವಾರ) ಸಮಾರೋಪ ನಡೆಯಲಿದೆ.
ಈ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ಅವರನ್ನು ಶಾಸಕ ರಾಜೇಶ್ ನಾಯ್ಕ್ ಸ್ವಾಗತಿಸಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!