ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ಎಸ್.ವೆಂಕಟೇಶನ್ ಅವರ ಬಗ್ಗೆ ಮಾಡಿದ ಟ್ವೀಟ್ ವಿಚಾರವಾಗಿ ಸೈಬರ್ ಅಪರಾಧ ವಿಭಾಗದ ಪೊಲೀಸರು ನಿನ್ನೆ ರಾತ್ರಿ ಸೂರ್ಯ ಅವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಮಾತನಾಡಿದ್ದು,ಸೂರ್ಯ ಅವರನ್ನು ಬಂಧಿಸಿರುವುದು ಖಂಡನೀಯ ಎಂದಿದ್ದಾರೆ.