ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಚಾಂಗ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ₹ 6,000 ಆರ್ಥಿಕ ನೆರವು ಘೋಷಿಸಿದ್ದಾರೆ.
ಪ್ರವಾಹವು ಜನರ ಜೀವನೋಪಾಯದ ಮೇಲೆ ಪರಿಣಾಮ ಉಂಟುಮಾಡಿದ್ದು, ತೊಂದರೆಗೆ ಸಿಲುಕಿರುವವರಿಗೆ ಪಡಿತರ ಮಳಿಗೆಗಳ ಮೂಲಕ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ಹೇಳಿದೆ.