ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮತ್ತೆ ಕಾವೇರಿ ನೀರಿಗಾಗಿ ಕ್ಯಾತೆ ತೆಗೆದಿದ್ದು, ಕರ್ನಾಟಕ ವಿರುದ್ಧ ಸುಪ್ರೀಂಕೋರ್ಟ್ ಗೆ ಸ್ಟಾಲಿನ್ ಸರ್ಕಾರ ಅರ್ಜಿ ಸಲ್ಲಿಸಿದೆ.
ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಇಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.ತಮ್ಮ ಪಾಲಿನ ನೀರು ಕರ್ನಾಟಕ ಸರ್ಕಾರ ಬಿಡುತ್ತಿಲ್ಲ. ಕರ್ನಾಟಕ ಸರ್ಕಾರ ನೀರು ಬಿಡದೇ ಬೆಳೆಗಳು ಹಾನಿಯಾಗಿವೆ. ತಮಿಳುನಾಡಿನ ಕಾವೇರಿ ನದಿ ಪಾತ್ರದ ಜನರಿಗೆ ನೀರಿನ ಸಮಸ್ಯೆಯಾಗಿದೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.