ಹೊಸದಿಗಂತ ವರದಿ,ಗದಗ:
ಭಾನುವಾರ ಪ್ರಕಟಗೊಂಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಜಿಲ್ಲೆ ಎರಡು ಪ್ರಶಸ್ತಿಗಳು ಪ್ರಕಟಗೊಳ್ಳುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿವೆ.ಸಂಘ- ಸಂಸ್ಥೆ ವಿಭಾಗದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘಕ್ಕೆ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ಹಿರಿಯ ಪತ್ರಕರ್ತ ಜಿ.ಎಂ.ಶಿರಹಟ್ಟಿ ಅವರಿಗೆ ಪ್ರಶಸ್ತಿ ಲಭಿಸಿದೆ.
ಲಿಂಗಾಯತ ಪ್ರಗತಿಶೀಲ ಸಂಘವು ಕಳೆದ 1970 ರಿಂದ ಕಾರ್ಯ ನಿರ್ವಹಿಸುತ್ತಿದೆ. ಸಂಗೀತ, ಸಾಹಿತ್ಯ, ಧಾರ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಸಂಘ. 50 ವರ್ಷಗಳ ಸುಧೀರ್ಘ ಸೇವೆ ಗಮನಿಸಿ ಸಂಘಕ್ಕೆ ಪ್ರಶಸ್ತಿ ನೀಡಲಾಗಿದೆ.
ಅದೇರೀತಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಜಿ.ಎಮ್. ಶಿರಹಟ್ಟಿ ಅವರು ನಾಗರಿಕ ಪ್ರತ್ರಿಕೆ ಮೂಲಕ ವೃತ್ತಿ ಆರಂಭಿಸಿ 1958 ರಿಂದ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಪ್ರಸಕ್ತ ಬೆಂಗಳೂರಿನ ವಿವಿಧ ಪತ್ರಿಕೋದ್ಯಮ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.