ಶಿಕ್ಷಕರ ನೇಮಕಾತಿ ಹಗರಣ: ಬಂಗಾಳ ಸಚಿವ ಪಾರ್ಥ ಚಟರ್ಜಿ ಎರಡು ಇಡಿ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಇಡಿ ವಶಕ್ಕೆ ನೀಡಿ ಆದೇಶಿಸಿದೆ.
ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಇಡಿ ಸುಮಾರು 26 ಗಂಟೆಗಳ ಕಾಲ ವಿಚಾರಣೆ ಬಳಿಕ ಬಂಧಿಸಿದ್ದು, ಬಳಿಕ ಬ್ಯಾಂಕ್ ಶಾಲ್ ಕೋರ್ಟ್ ಮುಂದೆ ಹಾಜರುಪಡಿಸಿತು. ಇದೀಗ ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಸಚಿವರನ್ನು ಎರಡು ದಿನ ಇಡಿ ವಶಕ್ಕೆ ನೀಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಇಂದು ರಜೆ ಇದ್ದ ಕಾರಣ ಆರೋಪಿಯನ್ನು ಬ್ಯಾಂಕ್ ಶಾಲ್ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಸಂಜೆ ದಾಳಿ ನಡೆಸಿದ್ದು, ಸುಮಾರು 20 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಇಂದು ಬಂಧನ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!