ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಕುರಿತ ಮಾಹಿತಿ ಪಡೆಯಲು ತಂಡ ನೇಮಕ: ನಳಿನ್‍ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಶಿರೋಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಪಡೆಯಲು ಪಕ್ಷದಿಂದ ರಾಜ್ಯ ತಂಡವನ್ನು ನೇಮಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ.

ಭಾನುವಾರದಂದು ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ. ಉಮೇಶ್ ಜಾಧವ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಶಾಸಕ ಬಸವರಾಜ ಮತ್ತೀಮೂಡ್, ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ಶಾಸಕ ಶರಣು ಸಲಗಾರ್, ಬಿ.ಜಿ. ಪಾಟೀಲ್, ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಿ ಅವರ ತಂಡವು ಸ್ಥಳಕ್ಕೆ ತೆರಳಲಿದೆ ಎಂದು ಹೇಳಿದ್ದಾರೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!