ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮತ್ತೆ ಹೊಸ ಸಾರಥಿ ಆಯ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವೆಸ್ಟ್​ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೋಸ್ಕರ ಭಾರತ ತಂಡ ಪ್ರಕಟಗೊಂಡಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಕ್ಯಾಪ್ಟನ್​ ಆಗಿ ಆಯ್ಕೆಯಾಗಿದ್ದಾರೆ.
16 ಸದಸ್ಯರ ತಂಡ ಪ್ರಕಟಗೊಳಿಸಲಾಗಿದ್ದು, ಉಪನಾಯಕನಾಗಿ ಆಲ್​ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ.
ತಂಡದಲ್ಲಿ ಕೆಲವೊಂದು ಹೊಸ ಪ್ರತಿಭೆಗಳಿಗೆ ಸ್ಥಾನ ನೀಡಲಾಗಿದೆ. ಮುಖ್ಯವಾಗಿ ದೀಪಕ್ ಹೂಡಾ, ಅರ್ಷದೀಪ್​ ಸಿಂಗ್, ಆವೇಶ್ ಖಾನ್ ಹಾಗೂ ಪ್ರಸಿದ್ಧ್ ಕೃಷ್ಣ ಚಾನ್ಸ್ ಪಡೆದುಕೊಂಡಿದ್ದಾರೆ.
ರಿಷಭ್ ಪಂತ್​ಗೆ ವಿಶ್ರಾಂತಿ ನೀಡಿರುವ ಕಾರಣ ಇಬ್ಬರು ವಿಕೆಟ್ ಕೀಪರ್​ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್​ಗೆ ಅವಕಾಶ ನೀಡಲಾಗಿದೆ. ಜುಲೈ 22ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ.

ಏಕದಿನ ತಂಡ
ಶಿಖರ್ ಧವನ್​(ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್​, ಶುಬ್ಮನ್ ಗಿಲ್​, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್​, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್​(ವಿ.ಕೀ), ರವೀಂದ್ರ ಜಡೇಜಾ(ಉಪನಾಯಕ), ಶಾರ್ದೂಲ್ ಠಾಕೂರ್. ಯಜುವೇಂದ್ರ ಚಹಲ್​​, ಅಕ್ಸರ್ ಪಟೇಲ್​, ಆವೇಶ್ ಖಾನ್​, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

ಹಿರಿಯ ಪ್ಲೇಯರ್ಸ್​ಗೆ ವಿಶ್ರಾಂತಿ:
ಟೀಂ ಇಂಡಿಯಾ ಸಿಮೀತ ಓವರ್​ಗಳ ನಾಯಕನಾಗಿರುವ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್​ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!