ಮತ್ತೊಂದು ಗೆಲುವಿನ ತವಕದಲ್ಲಿ ಟೀಮ್ ಇಂಡಿಯಾ: ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದ ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ತಂಡದಿಂದ ಹೊರಗುಳಿದಿದ್ದಾರೆ. ಪ್ರಸಿದ್ಧ್ ಬದಲು ವೇಗಿ ಅವೇಶ್ ಖಾನ್ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ.
ಇತ್ತ ವೆಸ್ಟ್ ಇಂಡೀಸ್ ತಂಡದಲ್ಲಿ ಇಂಜುರಿ ಕಾರಣದಿಂದ ಅನಿವಾರ್ಯ ಬದಲಾವಣೆ ಮಾಡಲಾಗಿದೆ. ಹೈಡೆನ್ ವಾಲ್ಶ್ ತಂಡ ಸೇರಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ 3 ರನ್ ರೋಚಕ ಗೆಲುವು ಸಾಧಿಸಿದ ಭಾರತ ಇದೀಗ ಎರಡನೇ ಪಂದ್ಯ ಗೆದ್ದು ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ. ಇತ್ತ ವಿಂಡೀಸ್ ತಂಡಕ್ಕೆ ಸರಣಿಯಲ್ಲಿ ಜೀವಂತವಾಗಿರಲು ಪಂದ್ಯ ಗೆಲ್ಲಲೇಬೇಕಿದೆ.

ಟೀಂ ಇಂಡಿಯಾ
ಶಿಖರ್ ಧವನ್(ನಾಯಕ), ಶುಬಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೀಪಕ್ ಹೂಡ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಾಲ್, ಅವೇಶ್ ಖಾನ್

ವೆಸ್ಟ್ ಇಂಡೀಸ್
ಶೈ ಹೋಪ್, ಬ್ರ್ಯಾಂಡನ್ ಕಿಂಗ್, ಶಮ್ರಾ ಬ್ರೂಕ್ಸ್, ಕೈಲ್ ಮೈಯರ್ಸ್, ನಿಕೋಲಸ್ ಪೂರನ್(ನಾಯಕ), ರೋವ್ಮನ್ ಪೊವೆಲ್, ಆಕೀಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೊಸೆಫ್, ಜೈಡೆನ್ ಸೀಲ್ಸ್, ಹೈಡನ್ ವಾಲ್ಶ್

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!