ಸರಣಿ ಗೆಲ್ಲುವ ತವಕದಲ್ಲಿ ಟೀಮ್ ಇಂಡಿಯಾ: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಮ್​ ಇಂಡಿಯಾ ಟಾಸ್​ ಗೆದ್ದು ಬ್ಯಾಟಿಂಗ್​ ಮಾಡುವ ನಿರ್ಧಾರ ಕೈಗೊಂಡಿದೆ.

ಭಾರತ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.​ ದ್ವಿತೀಯ ಪಂದ್ಯದಲ್ಲಿ ಆಡಿದ ಬಳಗವನ್ನೇ ಈ ಪಂದ್ಯದಲ್ಲಿಯೂ ಮುಂದುವರಿಸಿದೆ.

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಜಿದ್ದಾಜಿದ್ದಿನಿಂದ ಹೋರಾಟ ನಡೆಸುವ ನಿರೀಕ್ಷೆ ಇದೆ. ಶ್ರೀಲಂಕಾ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದೆ. ಭಾನುಕಾ ರಾಜಪಕ್ಷೆ ಬದಲು ಆವಿಷ್ಕ ಫೆರ್ನಾಂಡೊ ಅವರಿಗೆ ಅವಕಾಶ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!