ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ.
ಭಾರತ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದ್ವಿತೀಯ ಪಂದ್ಯದಲ್ಲಿ ಆಡಿದ ಬಳಗವನ್ನೇ ಈ ಪಂದ್ಯದಲ್ಲಿಯೂ ಮುಂದುವರಿಸಿದೆ.
ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಜಿದ್ದಾಜಿದ್ದಿನಿಂದ ಹೋರಾಟ ನಡೆಸುವ ನಿರೀಕ್ಷೆ ಇದೆ. ಶ್ರೀಲಂಕಾ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದೆ. ಭಾನುಕಾ ರಾಜಪಕ್ಷೆ ಬದಲು ಆವಿಷ್ಕ ಫೆರ್ನಾಂಡೊ ಅವರಿಗೆ ಅವಕಾಶ ನೀಡಲಾಗಿದೆ.