ರಿಷಬ್ ಪಂತ್ ಚೇತರಿಕೆಗೆ ಶಿವನ ಬಳಿ ಪಾರ್ಥಿಸಿದ ಟೀಂ ಇಂಡಿಯಾ ಆಟಗಾರರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರ ಉತ್ತಮ ಆರೋಗ್ಯಕ್ಕಾಗಿ ಟೀಂ ಇಂಡಿಯಾ (Team India) ಆಟಗಾರರು ಸೋಮವಾರ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ (Ujjain Mahakaleswar Temple) ಪ್ರಾರ್ಥನೆ ಸಲ್ಲಿಸಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್ ಯಾದವ್, ಸ್ಪಿನ್ ಬೌಲರ್ ಕುಲ್‌ದೀಪ್ ಯಾವದ್ ಹಾಗೂ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸೋಮವಾರ ಬೆಳಗ್ಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ `ರಿಷಬ್ ಪಂತ್’ ಆದಷ್ಟು ಬೇಗ ಗುಣಮುಖರಾಗಿ ಟೀಂ ಇಂಡಿಯಾಕ್ಕೆ ಮರಳುವಂತೆ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ್ದಾರೆ.


ಸಾಂಪ್ರದಾಯಿಕ ಧೋತಿ, ಅಂಗವಸ್ತ್ರ ಉಡುಗೆ ತೊಟ್ಟು ಮುಂಜಾನೆ ನಡೆದ ಶಿವನ `ಭಸ್ಮ ಆರತಿ’ಯಲ್ಲೂ (Bhasma Aarti) ಭಾಗಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, `ರಿಷಬ್ ಪಂತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿ ಗೆದ್ದಿದ್ದೇವೆ. ಅವರ ವಿರುದ್ಧದ ಅಂತಿಮ ಪಂದ್ಯ ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!