ಟೀಂ ಇಂಡಿಯಾ ಬೌಲರ್‌ ದಾಳಿಗೆ ಮಂಕಾದ ಜಿಂಬಾಬ್ವೆ: 189 ರನ್‌ಗಳಿಗೆ ಸರ್ವಪತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ ದಾಳಿಗೆ ಜಿಂಬಾಬ್ವೆ ಬ್ಯಾಟರ್‌ಗಳನ್ನು ತಬ್ಬಿಬ್ಬಗಾಗಿದ್ದು, ಕೇವಲ 189 ರನ್‌ಗಳಿಗೆ ಸರ್ವಪತನ ಕಂಡಿದೆ.

ಇಲ್ಲಿನ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್, ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ತೆಗೆದುಕೊಂಡರು.

ಬೌಲಿಂಗ್ ಮಾಡುವಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಯಶಸ್ವಿಯಾದರು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಲಿಳಿದ ಆತಿಥೇಯ ಜಿಂಬಾಬ್ವೆ ತಂಡವು ಎಚ್ಚರಿಕೆಯ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ ಇನೋಸೆಂಟ್ ಕಾಲಾ ಹಾಗೂ ಮುರುಮಾನಿ ರಕ್ಷಣಾತ್ಮಕ ಆಟಕ್ಕೆ ಮೊರೆಹೋದರು. ಮೊದಲ 6.4 ಓವರ್‌ಗಳಲ್ಲಿ ಈ ಜೋಡಿ 25 ರನ್‌ಗಳ ಜತೆಯಾಟವಾಡಿತು.

ಗಾಯದ ಸಮಸ್ಯೆಯಿಂದಾಗಿ ಕಳೆದ 6 ತಿಂಗಳಿನಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ. ಇದೀಗ ಕಮ್‌ಬ್ಯಾಕ್‌ ಪಂದ್ಯದಲ್ಲಿ ಕೇವಲ 4 ಎಸೆತಗಳಲ್ಲೇ ಜಿಂಬಾಬ್ವೆ ಆರಂಭಿಕ ಬ್ಯಾಟರ್‌ಗಳಿಬ್ಬರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವೆಸ್ಲೆ ಮಡೆವೆರೆ (5) ಕೂಡಾ ಹೆಚ್ಚುಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ದೀಪಕ್ ಚಹರ್ ಅವಕಾಶ ನೀಡಲಿಲ್ಲ.

ಜಿಂಬಾಬ್ವೆ ತಂಡದ ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್‌ಗಳು ಕೇವಲ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಜಿಂಬಾಬ್ವೆ ತಂಡವು ಕೇವಲ 6 ರನ್‌ಗಳ ಅಂತರದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಸಿಕಂದರ್ ರಾಜಾ(12), ನಾಯಕ ರೆಗಿಸ್‌ ಚಕಬ್ವಾ(35), ರಿಯಾನ್ ಬುರ್ಲ್‌(11) ಹಾಗೂ ಲೂಕ್ ಜೋಗ್ವೆ(13) ಉಪಯುಕ್ತ ರನ್ ಕಾಣಿಕೆ ನೀಡುವ ಮೂಲಕ ರನ್‌ ಕಾಣಿಕೆ ನೀಡಿದರು.

ಟೀಂ ಇಂಡಿಯಾ ಪರ ವೇಗಿ ದೀಪಕ್ ಚಹರ್, ಪ್ರಸಿದ್ದ್ ಕೃಷ್ಣ ಹಾಗೂ ಲೆಗ್‌ ಸ್ಪಿನ್ನರ್ ಅಕ್ಷರ್ ಪಟೇಲ್ ತಲಾ 3 ವಿಕೆಟ್ ಕಬಳಿಸಿದರೇ, ಹೈದರಾಬಾದ್ ಮೂಲದ ವೇಗಿ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸಿದರು. ಇನ್ನು ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್ 10 ಓವರ್ ಬೌಲಿಂಗ್ ಮಾಡಿದರೂ ಸಹಾ ಒಂದು ವಿಕೆಟ್ ಕಬಳಿಸಲು ಸಾಧ್ಯವಾಗಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!