ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ.
ಇಂಜುರಿ ಕಾರಣದಿಂದಾಗಿ ದೀಪಕ್ ಚಹರ್ ಸರಣಿಯಿಂದ ಹೊರಬಿದ್ದಿದ್ದರೆ, ಇದೀಗ ಮೂಳೆ ಮುರಿತದಿಂದ ಸೂರ್ಯಕುಮಾರ್ ಯಾದವ್ ಸರಣಿಯಿಂದ ಹೊರನಡೆದಿದ್ದಾರೆ. ಭಾನುವಾರ ಕೊಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಭರ್ಜರಿ ಫಾರ್ಮ್ನಲ್ಲಿದ್ದ ಈ ಎರಡು ಆಟಗಾರರು ಇಂಜುರಿ ಕಾರಣದಿಂದ ಹೊರಗುಳಿದಿದ್ದು, ತಂಡಕ್ಕೆ ಪೆಟ್ಟು ಬಿದ್ದಿದೆ.