ಶಂಭು ಗಡಿಯಲ್ಲಿ ಪ್ರತಿಭಟನೆ ವೇಳೆ ಅಶ್ರುವಾಯು, ಜಲ ಫಿರಂಗಿ ಪ್ರಯೋಗ: 17 ಮಂದಿ ರೈತರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹರಿಯಾಣ ಮತ್ತು ಪಂಜಾಬ್ ನಡುವಿನ ಶಂಭು ಗಡಿಯಲ್ಲಿ ದೆಹಲಿ ಗಡಿ ಪ್ರವೇಶಕ್ಕೆ ಪ್ರಯತ್ನಿಸಿದ ರೈತರ ಮೇಲೆ ಪೋಲಿಸರು ಅಶ್ರುವಾಯು ಮತ್ತು ಜಲ ಫಿರಂಗಿ ಬಳಿಸಿದ್ದು, ಘಟನೆಯಲ್ಲಿ 17 ಮಂದಿ ರೈತರು ಗಾಯಗೊಂಡಿದ್ದಾರೆ. ಘಟನೆ ಬಳಿಕ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಪ್ರತಿಭಟನಾನಿರತ ರೈತರು, ರಾಜಧಾನಿಯನ್ನು ಪ್ರವೇಶಿಸಲು ಇಂದು ಮೂರನೇ ಬಾರಿಗೆ ಪ್ರಯತ್ನಿಸಿದರು‌. ಮಧ್ಯಾಹ್ನ 12 ಗಂಟೆಗೆ ಹೋರಾಟ ಪ್ರಾರಂಭವಾದ ಬೆನ್ನಲೆ, ಹರಿಯಾಣ ಪೊಲೀಸರು ರೈತರ ಮೇಲೆ ಅಶ್ರುವಾಯು,‌ ಜಲ ಫಿರಂಗಿ ಪ್ರಯೋಗಿಸಿದರು.

ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಅಂಬಾಲಾದ ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಡಿ.14 ರಂದು ಬೆಳಗ್ಗೆ 6 ರಿಂದ ಡಿ.17 ರವರೆಗೆ ಸ್ಥಗಿತಗೊಳಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!