ಹೊಸದಿಗಂತ ವರದಿ, ಮೈಸೂರು
ಜೆಡಿಎಸ್ ನವರು ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಆಸೆಯಿಂದ ಜನತಾ ಜಲಧಾರೆ ಯಾತ್ರೆ ನಡೆಸಿದ್ದಾರೆ. ಆದರೆ ಅವರಿಗೆ ಕಣ್ಣೀರಧಾರೆ ಗ್ಯಾರಂಟಿ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಹೇಳಿದರು.
ಗುರುವಾರ ಮೈಸೂರಿನಲ್ಲಿ ದಕ್ಷಿಣ ಪದವೀಧರ ರ ಕ್ಷೇತ್ರದ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಕುಟುಂಬ ರಾಜಕಾರಣಕ್ಕೆ ಸೀಮಿತ ವಾದ ಪಕ್ಷ. ಹಾಗಾಗಿ ಆ ಪಕ್ಷವನ್ನು ಜನರು ಈಗಾಗಲೇ ತಿರಸ್ಕರಿಸಿದ್ದಾರೆ. ಹೀಗಿದ್ದರೂ ಮತ್ತೆ ಅಧಿಕಾರಕ್ಕೆ ಬರುವ ಆಸೆಯಿಂದ ಜಲಧಾರೆ ಯಾತ್ರೆ ನಡೆಸಿದ್ದಾರೆ. ಆದರೆ ಬರುವ ಚುನಾವಣೆಯಲ್ಲಿ ಆ ಪಕ್ಷದ ಗೆಲುವಿನ ಅಭ್ಯರ್ಥಿಗಳ ಸಂಖ್ಯೆ ಎರಡಂಕಿ ದಾಟಲ್ಲ. ಹಾಗಾಗಿ ಅವರ ಕುಟುಂಬಕ್ಕೆಂದು ನಡೆಸಿದ ಜಲಧಾರೆ ಮುಂದೆ ಕಣ್ಣೀರಧಾರೆಯಾಗಲಿದೆ ಎಂದು ಲೇವಡಿ ಮಾಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ