ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರಾಹುಲ್(29) ಎಂಬುವರೇ ಚಿಕ್ಕಮಗಳೂರು ಪ್ರವಾಸದ ವೇಳೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಟೆಕ್ಕಿಯಾಗಿದ್ದಾರೆ.
ಚಿಕ್ಕಮಗಳೂರಿಗೆ ಐವರು ಸ್ನೇಹಿತ ಜೊತೆಗೆ ಸೇರಿ ಪ್ರವಾಸಕ್ಕೆ ರಾಹುಲ್ ತೆರಳಿದ್ದರು. ಚಿಕ್ಕಮಗಳೂರು ಹೊರವಲಯದ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ.