ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಬೇಸತ್ತು ಮರಳಿ ಊರುಗಳಿಗೆ ತೆರಳುತ್ತಿರುವ ಟೆಕ್ಕಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಉಲ್ಬಣಗೊಂಡ ಹಿನ್ನೆಲೆ ಅನೇಕ ಐಟಿ ಉದ್ಯೋಗಿಗಳು ತಾತ್ಕಾಲಿಕವಾಗಿ ನಗರವನ್ನು ತೊರೆದು ಮರಳಿ ಊರಿಗೆ ತೆರಳುತ್ತಿದ್ದಾರೆ.

ನೀರಿನ ಸಮಸ್ಯೆ ನಗರದ ಮೇಲೆ ಭಾರಿ ಪರಿಣಾಮ ಬೀರುತ್ತಿದ್ದು, ಬಹುರಾಷ್ಟ್ರೀಯ ಕಂಪನಿಗಳ ಹಲವು ಉದ್ಯೋಗಿಗಳು ಮೈಸೂರಿನಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ.

ನಗರದಲ್ಲಿ ನೀರಿನ ಸಮಸ್ಯೆಯಿಂದ ತಾತ್ಕಾಲಿಕವಾಗಿ ಸ್ಥಳಾಂತರಗೊಳ್ಳುವ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ಕೆಲವು ಉದ್ಯೋಗಿಗಳು. ‘ನೋ ವರ್ಕ್ ಫ್ರಮ್ ಹೋಮ್’ ನೀತಿಯಿಂದ ಅವರ ಪರಿಸ್ಥಿತಿಯು ಕಷ್ಟಕರವಾಗಿ ಪರಿಣಮಿಸಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!