ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ಕಾರಣದ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನ ಕೊಚ್ಚಿನ್ ಬದಲು ಮುಂಬೈಯಲ್ಲಿ ಭೂ ಸ್ಪರ್ಶ ಮಾಡಿದೆ.
ದುಬೈನಿಂದ ಆಗಮಿಸುತ್ತಿದ್ದ ಈ ವಿಮಾನದಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಮಾರ್ಗ ಬದಲಿಸಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗೆ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.