ಟೆಕ್ಕಿಅತುಲ್‌ ಸೂಸೈಡ್‌ ಕೇಸ್‌ : ಉತ್ತರ ಪ್ರದೇಶಕ್ಕೆ ತೆರಳಿದ ಬೆಂಗಳೂರು ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾಫ್ಟ್​​ವೇರ್​ ಇಂಜಿನಿಯರ್ ಅತುಲ್ ಸುಭಾಷ್ (34) ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಮಾರತ್​ಹಳ್ಳಿ ಠಾಣೆ ಪೊಲೀಸರ ತಂಡ‌ ಆರೋಪಿಗಳ ವಿಚಾರಣೆ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿದೆ.

ಪ್ರಕರಣದ ತನಿಖಾಧಿಕಾರಿಯಾಗಿರುವ ಪಿಎಸ್ಐ ಜ್ಞಾನದೇವ್ ನೇತೃತ್ವದ ತಂಡ ಉತ್ತರ ಪ್ರದೇಶದ ಜೌನ್ ಪುರ್‌ಗೆ ತಲುಪಿದೆ. ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನ ಅನ್ವಯ ಮಾರತ್​​ ಹಳ್ಳಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಅದರನ್ವಯ ಉತ್ತರ ಪ್ರದೇಶದತ್ತ ತೆರಳಿರುವ ಪೊಲೀಸರ ತಂಡ, ಮೊದಲು ನೋಟಿಸ್ ಜಾರಿಗೊಳಿಸಿ ಮೃತನ ಪತ್ನಿಯ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಸಹಕರಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ. ಬಳಿಕ ಬಿಹಾರಕ್ಕೆ ತೆರಳಲಿರುವ ಪೊಲೀಸರು, ಅತುಲ್ ಸುಭಾಷ್ ಅವರ ಪೋಷಕರು, ಸಹೋದರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!