ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಅವರ ಪಕ್ಷಕ್ಕೆ ಇನ್ಮುಂದೆ ಹೊಸ ಹೆಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷಕ್ಕೆ ನೂತನ ಹೆಸರಿಡಲಾಗಿದೆ. ಇನ್ಮುಂದೆ ಈ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಲಾಗಿದೆ.
ಟಿಆರ್‌ಎಸ್ (TRS) ಹೆಸರನ್ನು ಬಿಆರ್‌ಎಸ್ (BRS) ಎಂದು ಬದಲಾಯಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ಔಪಚಾರಿಕವಾಗಿ ಅನುಮೋದನೆ ನೀಡಿದೆ.
ಪಕ್ಷದ ಹೆಸರು ಬದಲಾವಣೆ ಕುರಿತು ಆಯೋಗವು ಶೀಘ್ರದಲ್ಲೇ ಅಗತ್ಯ ಅಧಿಸೂಚನೆ ಹೊರಡಿಸಲಿದೆ. ಪಕ್ಷದ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರಿಗೆ ಪತ್ರ ಬರೆದು ಗುರುವಾರ ಈ ಕುರಿತು ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!