ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದ ತೆಲಂಗಾಣ ಸಿಎಂ ರೇವತ್ ರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಇದಕ್ಕೂ ಮುನ್ನ ಮಂಗಳವಾರ ಹೈದರಾಬಾದ್‌ನಲ್ಲಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಪ್ರತಿನಿಧಿಗಳನ್ನು ರೇವಂತ್ ರೆಡ್ಡಿ ಭೇಟಿಯಾಗಿ ಬಹು ವಲಯಗಳಿಗೆ ಹೂಡಿಕೆ ನಿರೀಕ್ಷೆಗಳನ್ನು ಚರ್ಚಿಸಿದ್ದರು.

ಹೈದರಾಬಾದ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಭೆಯಲ್ಲಿ ಕೈಗಾರಿಕೆ, ಕ್ರೀಡೆ, ವ್ಯಾಪಾರ ಮತ್ತು ಇತರ ಕ್ಷೇತ್ರಗಳಲ್ಲಿ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯನ್ನು ಚರ್ಚಿಸಲಾಯಿತು. ತೆಲಂಗಾಣ ಐಟಿ ಮತ್ತು ಕೈಗಾರಿಕಾ ಸಚಿವ ಡಿ ಶ್ರೀಧರ್ ಬಾಬು ಕೂಡ ಕ್ವೀನ್ಸ್‌ಲ್ಯಾಂಡ್ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!