ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚುನಾವಣಾ ಪ್ರಚಾರ ಅಂತಿಮ ಘಟ್ಟ ತಲುಪುತ್ತಿದ್ದಂತೆ ಎಲ್ಲ ಪಕ್ಷಗಳು ಪ್ರಚಾರದ ವೇಗ ಹೆಚ್ಚಿಸಿವೆ. ಇಂದು ತೆಲಂಗಾಣ ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಆಲಂಪುರಕ್ಕೆ ತೆರಳುವ ಅವರು, ಅಲ್ಲಿ ಕಾಂಗ್ರೆಸ್ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುವರು. ಬಳಿಕ ಸಂಜೆ 4 ಗಂಟೆಗೆ ನಲ್ಗೊಂಡ ಜಿಲ್ಲೆಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಚಾರ ಸಭೆಯ ನಂತರ, ಬೇಗಂಪೇಟೆ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ವಾಪಸಾಗಲಿದ್ದಾರೆ.
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡು ಸಿಎಂ ಬೆಂಬಲ ಘೋಷಿಸಿದ್ದು, ಡಿಎಕೆ ಕಾರ್ಯಕರ್ತರೂ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಬೆಂಬಲ ಹಿನ್ನೆಲೆ ಸ್ಟಾಲಿನ್ಗೆ ತೆಲಂಗಾಣ ಕಾಂಗ್ರೆಸ್ ಪಕ್ಷ ಧನ್ಯವಾದ ಅರ್ಪಿಸಿದೆ.