ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶೇಷ ತನಿಖಾ ತಂಡ (ಎಸ್ಐಟಿ)ವು ಟಿಆರ್ಎಸ್ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಆರೋಪದ ಭಾಗವಾಗಿ ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರಿಗೆ ನೀಡಿದ್ದ ನೋಟಿಸ್ಗೆ ತೆಲಂಗಾಣ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಎಸ್ಐಟಿ ಬಿಎಲ್ ಸಂತೋಷ್ ಅವರಿಗೆ ನೋಟಿಸ್ ನೀಡಿದ್ದ ಹಿನ್ನಲೆ ರದ್ದುಗೊಳಿಸುವಂತೆ ಕೋರಿ ಬಿ.ಎಲ್.ಸಂತೋಷ್ ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಎರಡೂ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿ ಸಂತೋಷ್’ಗೆ ರಿಲೀಫ್ ನೀಡಿದೆ.