ತೆಲಂಗಾಣ ಔಷಧ ಘಟಕ ದುರಂತ: ಸಾವಿನ ಸಂಖ್ಯೆ 42ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ಔಷಧ ಘಟಕದಲ್ಲಿ ಸಂಭವಿಸಿದ ರಿಯಾಕ್ಟರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ .

ಈವರೆಗೆ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಗಾಯಾಳುಗಳು ಅಸ್ವಸ್ಥರಾದ ಬಳಿಕ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.

ಸೋಮವಾರ ರಾತ್ರಿ 12 ರಿಂದ ಮಂಗಳವಾರ ಬೆಳಿಗ್ಗೆ 34 ಕ್ಕೆ ದೃಢಪಡಿಸಿದ ಸಾವಿನ ಸಂಖ್ಯೆ ವೇಗವಾಗಿ ಏರಿತು ಮತ್ತು ಈಗ 42 ಕ್ಕೆ ತಲುಪಿದೆ. ಮೃತರಲ್ಲಿ ಕೆಲವರ ದೇಹಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಗುರುತಿಸಲು ಡಿಎನ್ಎ ಪರೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಐಜಿಪಿ ವಿ. ಸತ್ಯನಾರಾಯಣ್ ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಈ ಭೀಕರ ಸ್ಫೋಟ ಸಂಭವಿಸಿತು. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಸುಮಾರು 150 ಮಂದಿ ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ 90 ಮಂದಿ ಸ್ಫೋಟದ ಸ್ಥಳದ ಸಮೀಪದಲ್ಲೇ ಇದ್ದರು ಎಂದು ಮೂಲಗಳು ತಿಳಿಸಿವೆ.

ಸ್ಫೋಟದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ತಾಂತ್ರಿಕ ತಜ್ಞರ ಪರಿಶೀಲನೆಯ ನಂತರ ಮಾತ್ರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಮೂಲಗಳು ಹೇಳಿವೆ. ಈ ದುರಂತದಲ್ಲಿ ಮೃತಪಟ್ಟ ಕನಿಷ್ಠ ಎಂಟು ಮಂದಿ ಕಾರ್ಮಿಕರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡ ಹನ್ನೆರಡು ಜನರಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!