ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಿರಿಯ ಎಬಿವಿಪಿ ನಾಯಕ, ಮಾಜಿ ಎಂಎಲ್ಸಿ ಎನ್.ರಾಮಚಂದ್ರ ರಾವ್ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್ ರೆಡ್ಡಿ ಅವರ ಬಳಿಕ ರಾಮಚಂದ್ರ ರಾವ್ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶೋಭಾ ಕರಂದ್ಲಾಜೆ ನೇಮಕ ಪತ್ರ ನೀಡಿದರು.
ಉತ್ತರಾಖಂಡ ಬಿಜೆಪಿ ಅಧ್ಯಕ್ಷರಾಗಿ ಮಹೇಂದ್ರ ಭಟ್
ಉತ್ತರಾಖಂಡ್ ಬಿಜೆಪಿ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ ಮಹೇಂದ್ರ ಭಟ್ ಮರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಹಿರಿಯ ನಾಯಕರು ಹಾಗೂ ರಾಜ್ಯ ಉಸ್ತುವಾರಿ ದುಷ್ಯಂತ್ ಗೌತಮ್ ಉಪಸ್ಥಿತಿಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ಹರ್ಷ ಮಲ್ಹೋತ್ರಾ ಭಟ್ ಪುನರ್ ಆಯ್ಕೆಯನ್ನು ಘೋಷಿಸಿದರು.
ಮೊದಲ ಬಾರಿಗೆ ಉತ್ತರಾಖಂಡದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಅಧ್ಯಕ್ಷರೊಬ್ಬರು ಆಯ್ಕೆಯಾಗಿದ್ದಾರೆ. ಚುನಾವಣೆಗೆ ಭಟ್ ಒಬ್ಬರೇ ಅರ್ಜಿ ಸಲ್ಲಿಸಿದ್ದರು.