ಆನೆಗೊಂದಿ ಇತಿಹಾಸ ಯುವ ಪೀಳಿಗೆಗೆ ತಿಳಿಸಿ: ಜನಾರ್ಧನ ರೆಡ್ಡಿ

ಹೊಸದಿಗಂತ ವರದಿ, ಗಂಗಾವತಿ:

ವಿಚಾರಗೋಷ್ಠಿ ಮೂಲಕ ಆನೆಗೊಂದಿ ಇತಿಹಾಸದ ಬಗ್ಗೆ ಇಂದಿನ ಯುವ ಸಮುದಾಯ ಮತ್ತು ಹೊಸ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು.

ಆನೆಗೊಂದಿ ಉತ್ಸವ-2024ರ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾಡಳಿತದ ಸಹಯೋಗದಲ್ಲಿ ಆನೆಗೊಂದಿಯ ಗಗನ್ ಮಹಲ್ ಹತ್ತಿರದ ಶಬರಿ ವೇದಿಕೆಯಲ್ಲಿ ಮಾರ್ಚ್ 11ರಂದು ಏರ್ಪಡಿಸಲಾದ ‘ಆನೆಗೊಂದಿ ಪರಂಪರೆ ಮತ್ತು ಅಭಿವೃದ್ಧಿ’ ವಿಷಯದ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿಯಾಗಿರುವ ಆನೆಗೊಂದಿ ಉತ್ಸವ ಆಚರಣೆಗೆ ಬಹಳಷ್ಟು ಕಡಿಮೆ ಸಮಯದಲ್ಲಿ ನಿರ್ಧಾರ ಮಾಡಿದ್ದರೂ ಸಹ ಉತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!