ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಸವಣ್ಣ ಸತ್ಯದ‌ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ.ಇಂದಿನ ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿರುವ ಅವರು, ಇಂದು ಕೂಡಲಸಂಗಮಕ್ಕೆ ಬಂದಿದ್ದಕ್ಕೆ ನನಗೆ ಬಹಳ ಖುಷಿಯಾಗಿದೆ. ಪ್ರಜಾಪ್ರಭುತ್ವ, ಶರಣ ತತ್ವವನ್ನು ಬಸವಣ್ಣ ರಕ್ಷಣೆ ಮಾಡಿದರು. ಪ್ರಜಾಪ್ರಭುತ್ವ, ಸಂಸತ್ತು ಎಲ್ಲದಕ್ಕೂ ಬಸವಣ್ಣ ಪ್ರೇರಣೆ. ಸಮಾಜದಲ್ಲಿ ಅಂಧತ್ವವಿದ್ದಾಗ ಬಸವಣ್ಣನವರ ಬೆಳಕಿನ‌ ಹಾದಿ ತೋರಿದರು ಎಂದರು.

ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ. ಇಂದಿನ ಸಮಾಜದಲ್ಲಿ ಸತ್ಯವನ್ನು ಹೇಳುವುದು ಬಹಳ ಕಷ್ಟವಾಗಿದೆ ಎಂದು ಹೇಳಿದರು.

ಬಸವಣ್ಣನವರು ಸತ್ಯ ಹೇಳಲು ಎಂದೂ ಹಿಂಜರಿಯಲಿಲ್ಲ, ಸತ್ಯಕ್ಕಾಗಿ ಮುನ್ನಡೆದರು. ಸಿದ್ದರಾಮ ಸ್ವಾಮೀಜಿ ಮಾತು ಕೇಳಿ ನನಗೆ ಅತೀವ ಸಂತಸವಾಯಿತು. ಎಲ್ಲರೂ ಸತ್ಯದ ಮಾರ್ಗದಲ್ಲಿ ನಡೆಯಿರಿ, ಎಲ್ಲರನ್ನೂ ಗೌರವಿಸಿರಿ ಎಂದರು.

ಇನ್ನೊಬ್ಬರನ್ನು ಪ್ರಶ್ನೆ ಮಾಡೋದು ಸುಲಭ. ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳೋದು ಕಷ್ಟದ ಕೆಲಸ. 8ನೇ ವಯಸ್ಸಿನಲ್ಲೇ ಜನಿವಾರ ಧರಿಸಲು ನಿರಾಕರಣೆ ಮಾಡಿದರು. 8ನೇ ವಯಸ್ಸಿನಲ್ಲಿ ಬಸವಣ್ಣನವರಿಗೆ ಇಂಥ ಯೋಚನೆ ಹೇಗೆ ಬಂತು ಎಂದು ಪ್ರಶ್ನಿಸಿದೆ ಆಗ ತನ್ನ ಸ್ನೇಹಿತನ‌ ಮೇಲೆ ಆಕ್ರಮಣ ನಡೆದಿತ್ತು. ಅವರ ಮೇಲಿನ ಶೋಷಣೆಯಿಂದ ಜಾಗೃತರಾದರು. ಜೀವನ ಪೂರ್ತಿ ತಮ್ಮನ್ನು ತಾವು ಜಾತಿವಾದ, ಲೋಕತಂತ್ರ, ಶೋಷಣೆ, ಸಮಾಜದ ಬಗ್ಗೆ ತಮ್ಮನ್ನು ತಾವು‌ ಪ್ರಶ್ನೆ ಮಾಡಿಕೊಂಡರು. ಆ ಪ್ರಶ್ನೆಗೆ ಉತ್ತರ ಕಂಡಕೊಂಡು ಜೀವನದಲ್ಲಿ ಪಾಲಿಸಿದರು.

ಸಮಾಜದಲ್ಲಿ ಸತ್ಯ ತಿಳಿದು ಕೊಂಡರೂ ಪ್ರಶ್ನೆ ಮಾಡಲು ಯಾರೂ ಮುಂದಾಗಲ್ಲ. ಜನ ಶೋಷಣೆ, ತಪ್ಪು ಕಂಡರೂ ಅದಕ್ಕೆ ಧ್ವನಿಯಾಗಲು ಭಯ ಪಡುತ್ತಾರೆ. ಆದರೆ ಬಸವಣ್ಣ ಹಿಂದೇಟು ಹಾಕಲಿಲ್ಲ. ಸಮಾಜ ಪರಿವರ್ತನೆಗೆ ಮುಂದಾದರು ಎಂದರು.

ಬಸವಣ್ಣನವರ ಮೂರ್ತಿ‌ ಮುಂದೆ ಹೂವು ಅರ್ಪಿಸಿದೆವು. ಅವರು ಬದುಕಿದ್ದಾಗ ಅವರ ಮೇಲೆ ಟೀಕೆಗಳು ಮಾಡಲಾಗಿತ್ತು. ನೋಯಿಸಿದರೂ ಅವರು ಹಿಂದೇಟು ಹಾಕಿಲ್ಲ. ಆ ಧೈರ್ಯಕ್ಕೆ ಅವರಿಗೆ ಇಂದು ಹೂವು ಅರ್ಪಿಸಿದ್ದೇವೆ. ಸ್ವಾಮೀಜಿ ಭಾಷಣ ಕೇಳಿ ಬಸವಣ್ಣನವರ ಬಗ್ಗೆ ತಿಳಿದುಕೊಳ್ಳಲು ಅವಕಾಶವಾಯಿತು. ಬಸವಣ್ಣನವರ ಬಗ್ಗೆ ಹಿಂದೆ ಬಂದಾಗಲೇ ತಿಳಿದಿದ್ದೇನೆ. ಅವರ ತತ್ವಗಳಿಂದ ಜೀವನಕ್ಕೆ ಮಾರ್ಗ ಸಿಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!