ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಕೊರಿಯೋಗ್ರಾಫರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಲದ ಹೊರೆಯಿಂದಾಗಿ ತೆಲುಗು ಕೊರಿಯೋಗ್ರಾಫರ್‌ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.

ಚೈತನ್ಯ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಹಣವನ್ನು ಮರಳಿ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಾಯುವುದಕ್ಕೂ ಮುನ್ನ ಅವರು ಕುಟುಂಬದವರ ಬಳಿ ಹಾಗೂ ಫ್ಯಾನ್ಸ್ ಬಳಿ ಕ್ಷಮೆ ಕೇಳಿದ್ದಾರೆ. ಅಭಿಮಾನಿಗಳು, ಚಿತ್ರರಂಗದವರು ಚೈತನ್ಯ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ರೀತಿಯ ಆತುರದ ನಿರ್ಧಾರ ತೆಗೆದುಕೊಳ್ಳಬಾರದಿತ್ತು ಎಂದು ಅನೇಕರು ಕಂಬನಿ ಮಿಡಿದಿದ್ದಾರೆ.

ಚೈತನ್ಯ ಅವರು ಸಾಯುವುದಕ್ಕೂ ಮುನ್ನ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದು, ಅದರಲ್ಲಿ ಅವರು ತಮ್ಮ ಸಾವಿಗೆ ಕಾರಣ ತಿಳಿಸಿದ್ದಾರೆ. ‘ನನ್ನ ಬಳಿ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ. ಅದು ನನಗೆ ಹೊರೆ ಎನಿಸುತ್ತಿದೆ’ ಎಂದು ಚೈತನ್ಯ ಹೇಳಿದ್ದಾರೆ.

‘ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಡದೆ ಅಪ್ಪ, ಅಮ್ಮ ಮತ್ತು ಸಹೋದರಿ ನನ್ನನ್ನು ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲಾ ಸ್ನೇಹಿತರಿಗೆ ಪ್ರಾಮಾಣಿಕ ಕ್ಷಮೆಯಾಚಿಸುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ. ಅವರೆಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದು ಮಾತ್ರವಲ್ಲ, ಅದನ್ನು ಮರುಪಾವತಿಸುವ ಸಾಮರ್ಥ್ಯವನ್ನೂ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನು ನೆಲ್ಲೂರಿನಲ್ಲಿ ಇದ್ದೇನೆ. ಇದು ನನ್ನ ಕೊನೆಯ ದಿನ’ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.

ತೆಲುಗಿನ ‘ಡೀ’ ಡ್ಯಾನ್ಸ್​ ಶೋ ಮೂಲಕ ಅವರು ಬಹಳ ಖ್ಯಾತಿಯಾಗಿದ್ದರು. ಅವರ ಅಗಲಿಕೆ ಅನೇಕರಿಗೆ ದುಃಖ ತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!