‘ಲೋಕ’ ಸಮರ ಅಖಾಡಕ್ಕೆ ತೆಲುಗು ಸ್ಟಾರ್ ಗ್ರಾಂಡ್ ಎಂಟ್ರಿ: ಎಲ್ಲೆಲ್ಲಿ ಪ್ರಚಾರ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. ಮತ್ತೊಂದೆಡೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈಗ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಕರ್ನಾಟಕದಲ್ಲಿ ತೆಲುಗು ಭಾಷಿಕರ ಮತಗಳನ್ನು ಗೆಲ್ಲಲು ಬಿಜೆಪಿ ತಂತ್ರ ರೂಪಿಸಿದೆ. ಪವನ್ ಕಲ್ಯಾಣ್ ನಟ ಮಾತ್ರವಲ್ಲ ರಾಜಕಾರಣಿಯೂ ಹೌದು. ಅವರು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರು ಹಾಗು ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಹೆಚ್ಚು ಒಲವು ಹೊಂದಿದ್ದಾರೆ.

ಅದಕ್ಕಾಗಿಯೇ ಅವರು ಎನ್‌ಡಿಎ ಜೊತೆ ಕೈಜೋಡಿಸಿದ್ದಾರೆ. ರಾಯಚೂರು ಮಾತ್ರವಲ್ಲದೆ ತೆಲುಗು ಪ್ರಾಬಲ್ಯವಿರುವ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲೂ ಪವನ್ ಕಲ್ಯಾಣ್ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಳ್ಳಾರಿ, ರಾಯಚೂರಿನಲ್ಲಿ ನಡೆಯಲಿರುವ ಪವನ್ ಕಲ್ಯಾಣ್ ಅವರ ರೋಡ್‌ಶೋ ದಿನಾಂಕ ಮತ್ತು ಮಾರ್ಗ ನಕ್ಷೆಯನ್ನು ಕೂಡ ಈಗಾಗಲೇ ನಿಗದಿ ಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!