ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಬೆಂಗಳೂರಿನಾದ್ಯಂತ ಬಿಜೆಪಿ ನಾಯಕರು ದೇವಸ್ಥಾನಗಳ ಸ್ವಚ್ಛತೆ ಅಭಿಯಾನದಲ್ಲಿ ಭಾಗವಹಿಸಿದರು.
ಪ್ರತಿಪಕ್ಷ ನಾಯಕ ಆರ್ ಅಶೋಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹಾಗೂ ಇತರ ನಾಯಕರು ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಸ್ವಚ್ಛತೆ ಅಭಿಯಾನವನ್ನು ಆಯೋಜಿಸಿದರು.
ಜಯನಗರ 4ನೇ ಬ್ಲಾಕ್ನ ವಿನಾಯಕ ದೇವಸ್ಥಾನದಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಹಾಗೂ ಸ್ಥಳೀಯ ಮುಖಂಡರೊಂದಿಗೆ ಅಶೋಕ್ ಅವರು ಸ್ವಚ್ಛತೆ ಅಭಿಯಾನದಲ್ಲಿ ಪಾಲ್ಗೊಂಡರು.
ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆ ದಿನದಲ್ಲಿ ಅನೇಕ ಕಾರ್ಯಕ್ರಮಗಳು ನಡೆದಿವೆ. ಡಾ ಅಶ್ವತ್ಥ ನಾರಾಯಣ್ ಅವರು ಮಲ್ಲೇಶ್ವರಂನ ಕೋದಂಡರಾಮ ದೇಗುಲದಲ್ಲಿ ಸ್ವಚ್ಛತೆ ಅಭಿಯಾನದಲ್ಲಿ ಭಾಗವಹಿಸಿದರು.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ದಿನ ಆಯೋಜಿಸುವ ವಿವಿಧ ಆಚರಣೆಯಲ್ಲಿ ಭಾಗವಹಿಸುವಂತೆ ಎಲ್ಲಾ ಹಿಂದೂಗಳಿಗೆ ಮನವಿ ಮಾಡುತ್ತೇನೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು. ಅಯೋಧ್ಯೆ ರಾಮ ಮಂದಿರ ಭಾರತಕ್ಕೆ ಹೆಮ್ಮೆಯ ಸಂಕೇತವಾಗಿದೆ ಎಂದರು.