ದೇಗುಲದ ಬಂಗಾರ ಕಳವು ಪ್ರಕರಣ: ಆರೋಪಿ ಬಂಧನ

ಹೊಸ ದಿಗಂತ ವರದಿ, ಮುಂಡಗೋಡ:

ತಾಲೂಕಿನ ಸನವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ದೇವಸ್ಥಾನದ ದೇವರ ಮೂರ್ತಿಯ ಮೇಲಿದ್ದ ಬಂಗಾರದ ಸರವನ್ನು ಕಳ್ಳತನ ಮಾಡಿದ್ದ ಆರೋಪಿ ಸೇರಿದಂತೆ ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ಸಮೇತ ಬಂಧಿಸಿದ ಘಟನೆ ಜರುಗಿದೆ.
ತಾಲೂಕಿನ ಸನವಳ್ಳಿ ಗ್ರಾಮದ ಮಹಾಂತೇಶ ಅರ್ಜುನ ಆರೆಗೊಪ್ಪ (43) ಎಂಬವನೆ ಬಂಧಿತ ಆರೋಪಿಯಾಗಿದ್ದಾನೆ.
ಜು.26ರಂದು ರಾತ್ರಿ ವೇಳೆ ಯಾರೋ ಕಳ್ಳರು ಕಬ್ಬಿಣದ ರಾಡ್‌ನಿಂದ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ ನಲ್ವತ್ತು ಗ್ರಾಂ ತೂಕದ ಎರಡು ಬಂಗಾರದ ಸರಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು ಪೊಲೀಸ್ ದೂರು ದಾಖಲಿಸಿದ್ದರು. ಈ ಕುರಿತು ಪರಿಶೀಲನೆ ನಡೆಸಿದ ಪೊಲೀಸರು ಅದೆ ಗ್ರಾಮದ ಮಹಾಂತೇಶ ಎಂಬವನ್ನು ಬಂಧಿಸಿ ಅವನಿಂದ ಕಳ್ಳತನ ಮಾಡಿದ್ದ ಬಂಗಾರದ ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಡಿವೈಎಸ್‌ಪಿ. ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ.ಸಿದ್ದಪ್ಪ ಸಿಮಾನಿ, ಪಿಎಸ್‌ಐ ಬಸವರಾಜ ಮಬನೂರ, ಎನ್.ಡಿ.ಜಕ್ಕಣ್ಣವರ,ಸಿಬ್ಬಂದಿಗಳಾದ ಮಣಿಮಾಲಿನ್ ಮೇಸ್ತ್ರಿ ಮಹ್ಮದಸಲಿಂ, ಗಣಪತಿ, ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ, ವಿವೇಕ ಪಟಗಾರ,ಸಹದೇವ,ಶರತ್ ದೇವಳಕ್ಕಿ, ತಿರುಪತಿ ಚೌಡಣ್ಣವರ,ಅರುಣ ಬಾಗೇವಾಡಿ, ಮಹಾಂತೇಶ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!