ವರದಕ್ಷಿಣೆ ಕಿರುಕುಳ ಕೇಸ್​ನಲ್ಲಿ ತಾತ್ಕಾಲಿಕ ರಿಲೀಫ್​: ನಟಿ ಅಭಿನಯಾಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಯಾಂಡಲ್ ವುಡ್ ನಟಿ ಅಭಿನಯಾ (Abhinaya) ಅವರಿಗೆ ಸುಪ್ರೀಂ ಕೋರ್ಟ್​ನಲ್ಲಿ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ.

ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!