ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೂಲ್ಕರ್ ಪ್ರತಿಮೆ ಅನಾವರಣ, ಕ್ರಿಕೆಟ್ ದೇವರಿಗೆ ಟ್ರಿಬ್ಯೂಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ಎಲ್ಲೆಡೆ ಸಚಿನ್, ಸಚಿನ್ ಘೋಷಣೆ ಮೊಳಗಿದೆ.

ಹೌದು, ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಇಂದು ವಿಶೇಷ ದಿನವಾಗಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.

ಕ್ರಿಕೆಟ್ ಲೋಕದಲ್ಲಿ ಹಲವಾರು ದಾಖಲೆಗಳನ್ನು ಬರೆದಿರುವ ಸಚಿನ್‌ಗೆ ಗೌರವಾರ್ಥವಾಗಿ ಪ್ರತಿಮೆ ನಿರ್ಮಾಣ ಮಾಡಿದ್ದು, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸಚಿನ್ ಪತ್ನಿ ಅಂಜಲಿ, ಪುತ್ರಿ ಸಾರಾ ಹಾಗೂ ಪುತ್ರ ಅಜಿತ್ ಆಗಮಿಸಿದ್ದರು. ಸಚಿನ್‌ಗೆ ಇದೀಗ 50 ವರ್ಷ ಈ ಅರ್ಥಪೂರ್ಣವಾದ 50 ವರ್ಷಗಳಿಗಾಗಿ ಈ ಸಮರ್ಪಣೆ ಮಾಡಲಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!