ಹೊಸದಿಗಂತ ವರದಿ,ಶಿವಮೊಗ್ಗ:
ನಗರದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ಶಿವಮೊಗ್ಗದಲ್ಲಿ ಹಾಗೂ ಭದ್ರಾವತಿ ತಹಶೀಲ್ದಾರ್ ಭದ್ರಾವತಿಯಲ್ಲಿ ಮೂರು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೀಗ ನಗರ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
144 ಜಾರಿಗೊಳಿಸಿದ ಹಿನ್ನೆಲೆ ಐದು ಜನರಿಗಿಂತ ಹೆಚ್ಚು ಮಂದಿ ಗುಂಪುಗೂಡುವುದಾಗಲೀ, ಸಭೆ-ಸಮಾರಂಭ ನಡೆಸುವುದಾಗಲೀ ನಿಷೇಧಿಸಲಾಗಿದೆ. ಮೆರವಣಿಗೆಯನ್ನು ಕೂಡ ನಡೆಸಲು ಅವಕಾಶ ಇಲ್ಲ. ಇನ್ನು ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ರದ್ದುಪಡಿಸಲಾಯಿತು.