ಕಾರು, ಬೈಕ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು

ಹೊಸದಿಗಂತ ವರದಿ ವಿಜಯಪುರ:
ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ನಗರ ಹೊರ ವಲಯ ಜುಮನಾಳ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ನಗರದ ಅಕ್ಷಯ, ಶುಭಂ, ಜಗ್ಗೇಶ ಮೃತಪಟ್ಟಿರುವ ದುರ್ದೈವಿಗಳು. ಈ ಯುವಕರು ಬೈಕ್ ಮೇಲೆ ತೆರಳುತ್ತಿದ್ದ ವೇಳೆಯಲ್ಲಿ ಕಾರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!