ಹೊಸ ದಿಗಂತ ವರದಿ , ಬೆಳಗಾವಿ:
ಸ್ವಿಪ್ಟ್ ಡಿಸೈರ್ ಕಾರೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲಿಯೇ ಆರು ಜನ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಗ್ರಾಮದ ಸಮೀಪ ಸಂಭವಿಸಿದೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಮರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಚಾಲಕ ಇನ್ನೋರ್ವರ ದೇಹಗಳು ಛಿದ್ರಗೊಂಡಿವೆ ಎಂದು ಪ್ರತ್ಯಕ್ಷ್ಯದರ್ಶಿಗಳು ಹೇಳಿದ್ದಾರೆ.
ಶಾರುಖ್ ಪೆಂಡಾರಿ ( 30 ) ಇಕ್ಬಾಲ್ ಜಮಾದಾರ ( 50 ) ಸಾನಿಯಾ ಲಂಗೊಟಿ ( 37 ) ಉಮರ್ ಲಂಗೋಟಿ ( 17 ) ಶಬನಮ್ ಲಂಗೋಟಿ ( 37 ) ಫರಾಹಾನ ಲಂಗೋಟಿ ( 13 ) ಮೃತಪಟ್ಟಿದ್ದು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.