ಚನ್ನಪಟ್ಟಣದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ಸಂಭವಿಸಿದೆ.

ಮಧು, ದೀಪು, ಅಭಿ ಮೃತದುರ್ದೈವಿಗಳು. ಚಿರು ಎಂಬುವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿಗಳು ಎಂದು ತಿಳಿದುಬಂದಿದೆ.

ಶಿಫ್ಟ್ ಕಾರಿನಲ್ಲಿ ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಒಂದಕ್ಕೆ ಹೋಗಿದ್ದರು. ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!