ಹಾಸನದಲ್ಲಿ ಭೀಕರ ಅಪಘಾತ : ಸೈಕಲ್‌ ಗೆ ಕಾರು ಡಿಕ್ಕಿ, ವೃದ್ಧ ದಾರುಣ ಸಾವು

ಹೊಸದಿಗಂತ ಹಾಸನ:

ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ದನಿಗೆ ಕಾರು ಡಿಕ್ಕಿಯಾಗಿ ವೃದ್ಧ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ.

ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ. ಕಾಟೀಹಳ್ಳಿ ಕಡೆಯಿಂದ ಬರುತ್ತಿದ್ದ KA-13-Z-5180 ನಂಬರ್‌ನ ಕಾರು ವೆನ್ಯೂ ಕಾರು ಅಜಾಗುರುಕತೆಯಿಂದ ಬಂದು ತಿರುವಿನಲ್ಲಿ ರಸ್ತೆ ಬಳಿ ತೆರಳುತ್ತಿದ್ದ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!