ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಬನ್ ಬಳಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್ ಹಳ್ಳಕ್ಕೆ ಬಿದ್ದು ಹತ್ತು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ವಿಷಯ ತಿಳಿದ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಂಬನ್ ನಾಗರಿಕ ತುರ್ತು ಪ್ರತಿಕ್ರಿಯೆ ತಂಡ (QRT) ನಡೆಸಿದೆ. ಮಳೆ ಹಾಗೂ ರಾತ್ರಿ ಆಗಿದ್ದರಿಂದ ರಕ್ಷಣಾ ಕಾರ್ಯ ದೊಡ್ಡ ಸವಾಲಾಗಿತ್ತು. ಇಂದು ಬೆಳಗ್ಗೆಯೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ರಾಂಬನ್ ಪ್ರದೇಶದಬ್ಯಾಟರಿ ಚಶ್ಮಾ ಬಳಿ ಈ ಘಟನೆ ನಡೆದಿದೆ. ಸದ್ಯದ ಮಾಹಿತಿ ಪ್ರಕಾರ ಇದುವರೆಗೆ 10 ಮೃತದೇಹಗಳು ಪತ್ತೆಯಾಗಿವೆ. ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ.