ದಿಗಂತ ವರದಿ ಕಲಬುರಗಿ
ಜಿಲ್ಲೆಯ ಕಮಲಾಪುರ ತಾಲೂಕಿನ ಬಳಿ ಭೀಕರ ಅಫಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ವಿಶಾಲ (17), ಚಂದ್ರಕಾಂತ (20), ಹಾಗೂ ಸಮೀರ್ (23) ಎಂಬ ಯುವಕರು ಮೃತಪಟ್ಟಿದ್ದು, ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು,ಕಿತ್ತಿ ಸಡಕ್ ಗ್ರಾಮದಿಂದ ಯುವಕರು ಕಲಬುರಗಿ ಕಡೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.
ಕಲಬುರಗಿ ಕಡೆಯಿಂದ ಬೀದರ್ ಜಿಲ್ಲೆಯ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ಕಮಲಾಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.