ಹೊಸ ದಿಗಂತ ವರದಿ,ಅಂಕೋಲಾ:
ಲಾರಿ ಮತ್ತು ಕಂಟೇನರ್ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಂಟೇನರ್ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ತಾಲೂಕಿನ ಹೆಬ್ಬುಳ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಸಾಗುತ್ತಿದ್ದ ಕೆ.ಎ22 ಎಎ4191 ನೋಂದಣಿ ಸಂಖ್ಯೆಯ ಲಾರಿ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಹೆಬ್ಬುಳ ದರ್ಗಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಎದುರಿನಿಂದ ಬರುತ್ತಿದ್ದ ಎಂ.ಎಚ್. 24 ಎ.ಯು7933 ನೋಂದಣಿ ಸಂಖ್ಯೆಯ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ರಸ್ತೆಯಲ್ಲಿ ಪಲ್ಟಿಯಾಗಿದ್ದು ಕಂಟೇನರ್ ಚಾಲಕನ ಬಲಗೈ ತುಂಡಾಗಿ ಎಡಗೈ
ಮುರಿದು ತಲೆಗೆ ಗಂಭೀರ ಗಾಯಗಳಾಗಿ ಅತ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೃತ ಚಾಲಕನ ಹೆಸರು ವಿಳಾಸ ತಿಳಿದು ಬಂದಿಲ್ಲ.
ಆರೋಪಿತ ಲಾರಿ ಚಾಲಕ ಬೆಳಗಾವಿಯ ಲಗಮೇಶ ಎಂಬಾತನ ಮೇಲೆ ಪ್ರಕರಣ ದಾಖಲಿಸಲಾಗಿದೆ.