ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಭೀಕರ ಅಪಘಾತ: ಐವರ ಬಲಿ, ಪ್ರಧಾನಿ ಮೋದಿ ಸಾಂತ್ವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕದಲ್ಲಿ ಅಪಘಾತದ ಸ್ಥಳದಲ್ಲಿ ವೇಗವಾಗಿ ಬಂದ ಕಾರೊಂದು 3 ಕಾರುಗಳು ಮತ್ತು ಆಂಬ್ಯುಲೆನ್ಸ್ ಅನ್ನು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ.

ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಬಾಂದ್ರಾವನ್ನು ದಕ್ಷಿಣ ಮುಂಬೈನ ವರ್ಲಿಗೆ ಸಂಪರ್ಕಿಸುವ ಸಮುದ್ರ ಸಂಪರ್ಕ ಸೇತುವೆಯ ದಕ್ಷಿಣದ ಭಾಗದಲ್ಲಿರುವ ಪೋಲ್‌ ಸಂಖ್ಯೆ 76 ಮತ್ತು 78 ರ ನಡುವೆ ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದರು.

ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ಥರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಸಾಂತ್ವನ ಹೇಳಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ‘ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ’ ಎಂದಿದ್ದಾರೆ.

 

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ‘ಆದಷ್ಟು ಬೇಗ ಗಾಯಾಳುಗಳ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು’ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!