ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಮುಂಗಾರು ಆಗಮಿಸಿದ ಬೆನ್ನಲ್ಲೇ ಮಳೆ ಸುರಿಯಲಾರಂಭಿಸಿದೆ. ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ಅಸ್ತವ್ಯಸ್ತವಾಗಿತ್ತು. ಗಾಳಿ ಮಳೆಯಿಂದ ಮೆಟ್ರೋ ಟ್ರ್ಯಾಕ್ ಮೇಲೆ ಮರದ ಕೊಂಬೆ ಬಿದ್ದಿರುವಂತಹ ಘಟನೆ ಟ್ರಿನಿಟಿ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ನಡೆದಿದೆ. ಮಳೆಯಿಂದಾಗಿ ಮರದ ಕೊಂಬೆ ಬಿದ್ದ ಕಾರಣ, ಪ್ರಸ್ತುತ ಇಂದಿರಾನಗರದಿಂದ ವೈಟ್ಫೀಲ್ಡ್, ಎಂ.ಜಿ.ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ರೈಲು ಸಂಚಾರ ಇರುತ್ತದೆ.
ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಟ್ವೀಟ್ ಮಾಡಿ ಟ್ರಾಫಿಕ್ ಅಲರ್ಟ್ ಮಾಡಿದ್ದಾರೆ. ವೆಬ್ ಜಂಕ್ಷನ್ ಬಳಿ ಮೆಟ್ರೋ ಟ್ರ್ಯಾಕ್ ಮೇಲೆ ದೊಡ್ಡ ಮರವೊಂದು ಬಿದ್ದಿದ್ದು, ಟ್ರಿನಿಟಿ ಸರ್ಕಲ್ ಕಡೆಗೆ ಸಂಚಾರ ನಿಧಾನವಾಗಲಿದೆ. ದಯವಿಟ್ಟು ಸಹಕರಿಸಿ ಎಂದು ಬರೆದುಕೊಂಡಿದ್ದಾರೆ.