ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಮೇಲೆ ಲಾರಿ ಬಿದ್ದು ಆರು ಮಂದಿ ಅಪ್ಪಚ್ಚಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.

ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌.ಪಿ ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!